Headlines

Video: ನೀಟ್ ಪರೀಕ್ಷಾ ಅಕ್ರಮ; ‘ಹಕ್ಕುಗಳಿಗಾಗಿ ಹೋರಾಡಿ, ಆದರೆ ವಿವೇಚನೆ ಕಳೆದುಕೊಳ್ಳಬೇಡಿ’ – ರವಿಶಂಕರ್ ಗುರೂಜಿ – Kannada News | Sri Sri Ravi Shankar Urges Calm Amidst NEET UG Protests: Peaceful Talks Key

ದೆಹಲಿ, ಜು.25: ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿರುವ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆ ಹಾಗೂ ವಿದ್ಯಾರ್ಥಿಗಳಲ್ಲಿ ಹೆಚ್ಚಾಗುತ್ತಿರುವ ಆಕ್ರೋಶದ ಕುರಿತು ಪ್ರತಿಕ್ರಿಯಿಸಿರುವ ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು, ವಿದ್ಯಾರ್ಥಿಗಳು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿರುವುದು ಸಮಂಜಸವಾಗಿದ್ದರೂ, ಆವೇಶದ ನಡುವೆ ವಿವೇಚನೆ ಮತ್ತು ಸಮಾಧಾನವನ್ನು ಕಳೆದುಕೊಳ್ಳಬಾರದೆಂದು ಕರೆ ನೀಡಿದ್ದಾರೆ. ಪ್ರತಿಭಟನೆಗಳ ಸನ್ನಿವೇಶವನ್ನು ಅಸಾಮಾಜಿಕ ಹಾಗೂ ದೇಶವಿರೋಧಿ ಶಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುವ ಅಪಾಯವಿರುವುದರಿಂದ ಪ್ರತಿಯೊಬ್ಬರೂ ಅತ್ಯಂತ ಜಾಗರೂಕರಾಗಿರಬೇಕು ಎಂದು ಅವರು ಎಚ್ಚರಿಸಿದ್ದಾರೆ. ಯಾವುದೇ ಸಮಸ್ಯೆಯಾಗಿದ್ದರೂ ಸರ್ಕಾರದೊಂದಿಗೆ ಶಾಂತಿಯುತ ಮಾತುಕತೆಯ ಮೂಲಕವೇ ಶಾಶ್ವತ ಪರಿಹಾರ ಕಂಡುಕೊಳ್ಳಲು ಸಾಧ್ಯವಿದೆ. ಆದ್ದರಿಂದ ಯುವಜನತೆ ಆಕ್ರೋಶದ ರಭಸದಲ್ಲಿ ಅಶಾಂತಿಗೆ ಆಸ್ಪದ ನೀಡದೆ ಸಂಯಮದಿಂದ ಶಾಂತಿಯುತ ಮಾರ್ಗವನ್ನು ಅನುಸರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​​​ ಮಾಡಿ

Source link

Leave a Reply

Your email address will not be published. Required fields are marked *