ನಯಾಗಢ, ಮೇ 07: ಒಡಿಶಾದ ನಯಾಗಢದಲ್ಲಿ ಜೇನುತುಪ್ಪ ತರಲು ಹೋದ ಶಿಬಾ ಪ್ರಧಾನ್ ಎಂಬ ಬಾಲಕನ ಪಾಲಿಗೆ ಕಾಡು ದುಃಸ್ವಪ್ನವಾಯಿತು. ಬಂಡೆಯ ಬಿರುಕಿನಲ್ಲಿದ್ದ ಜೇನುಗೂಡು ತೆಗೆಯಲು ಹೋದಾಗ, ಬಾಲಕನ ತಲೆ ಇಕ್ಕಟ್ಟಾದ ಸಂದಿಯಲ್ಲಿ ಸಿಲುಕಿಕೊಂಡಿತು. ಆತಂಕದ ವಿಷಯವೆಂದರೆ, ಅದೇ ಕಿರಿದಾದ ಜಾಗದಲ್ಲಿ ಬಾಲಕನ ಮುಖದ ಮುಂದೆಯೇ ಭೀಕರ ವಿಷಪೂರಿತ ಹಾವೊಂದು ಹೆಡೆ ಎತ್ತಿ ಕುಳಿತಿತ್ತು. ಅತ್ತ ಕದಲಲಾಗದೆ, ಇತ್ತ ಹಾವಿನ ಭಯದಿಂದ ಬಾಲಕ ಎಂಟು ಗಂಟೆಗಳ ಕಾಲ ಸಿಲುಕಿಯೇ ಇದ್ದ.
ಪೊಲೀಸರು ಮತ್ತು ಅಗ್ನಿಶಾಮಕ ದಳದ ಎರಡು ತಂಡಗಳು ಹಾವಿನ ಸವಾಲನ್ನೂ ಮೀರಿ ಕಾರ್ಯಾಚರಣೆ ನಡೆಸಿ, ಬಾಲಕನನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಅದೃಷ್ಟವಶಾತ್ ಬಾಲಕನಿಗೆ ಯಾವುದೇ ಗಾಯಗಳಾಗಿಲ್ಲ. ಕಿರಿದಾದ ಸಂದು, ಎದುರಿಗಿದ್ದ ಹಾವು ಮತ್ತು ಎಂಟು ಗಂಟೆಗಳ ಹೋರಾಟ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
