Video: ಭಾರತದಲ್ಲಿ ನೆಲೆಸುವ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕೆನಡಿಯನ್ ವ್ಯಕ್ತಿ

Video: ಭಾರತದಲ್ಲಿ ನೆಲೆಸುವ ನಿರ್ಧಾರದ ಹಿಂದಿನ ಕಾರಣ ಬಿಚ್ಚಿಟ್ಟ ಕೆನಡಿಯನ್ ವ್ಯಕ್ತಿ

ವಿದೇಶಿಗರಿಗೆ ಭಾರತದ ಅಂದ್ರೆ (foreigner) ಅದೇನೋ ಸೆಳೆತ. ಹೀಗಾಗಿ ಆಚಾರ ವಿಚಾರ, ಉಡುಗೆ ತೊಡುಗೆಯನ್ನು ಇಷ್ಟ ಪಟ್ಟು ತಮ್ಮ ಕುಟುಂಬದೊಂದಿಗೆ ಇಲ್ಲೇ ಜೀವನ ಕಟ್ಟಿಕೊಳ್ಳೋದು ಇದೆ. ಕಳೆದ ಎಂಟು ವರ್ಷಗಳಿಂದ ಬೆಂಗಳೂರಿನಲ್ಲಿ (Bengaluru) ವಾಸಿಸುತ್ತಿರುವ ಕೆನಡಾದ ವ್ಯಕ್ತಿಯೊಬ್ಬರು ತಾನು ಮಾತ್ರ ಭಾರತದಲ್ಲಿ ನೆಲೆಸಲು ಯಾಕೆ ಆಯ್ಕೆ ಮಾಡಿಕೊಂಡೆ ಎಂದು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರ ಗಮನ ಸೆಳೆದಿದೆ.

ಕ್ಯಾಲೆಬ್ ಫ್ರೀಸೆನ್ (@caleb_friesen) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಬೆಂಗಳೂರಿನಲ್ಲಿ ವಾಸಿಸುವ ಕ್ಯಾಲೆಬ್ ಫ್ರೈಸೆನ್ ಎಂಬ ವ್ಯಕ್ತಿಯೂ ಆಗಾಗ್ಗೆ ಕೇಳುವ ಪ್ರಶ್ನೆಗೆ ಉತ್ತರಿಸಿದ್ದಾರೆ. ನೀವು ಭಾರತದಲ್ಲಿ ವಾಸಿಸಲು ಏಕೆ ಆಯ್ಕೆ ಮಾಡುತ್ತೀರಿ? ನನಗೆ ಈ ಪ್ರಶ್ನೆ ತುಂಬಾ ಬರುತ್ತದೆ. ಆದರೆ ಈ ಪ್ರಶ್ನೆಯೂ ಅಪನಂಬಿಕೆಯ ಭಾವನೆಯನ್ನು ಹೊಂದಿರುತ್ತದೆ. ನೀವು ಭಾರತದಲ್ಲಿ ಏಕೆ ವಾಸಿಸುತ್ತಿದ್ದೀರಿ ಎಂಬುದು ಮಾತ್ರವಲ್ಲ? ಯಾರಾದರೂ ಸ್ವಯಂಪ್ರೇರಣೆಯಿಂದ ಭಾರತದಲ್ಲಿರಲು ಏಕೆ ಬಯಸುತ್ತಾರೆ ಎಂಬುದು ಕೂಡ ಅದೇ ಆಗಿದೆ?. ಈ ಪ್ರಶ್ನೆಯೂ ಕೆಲವು ಭಾರತೀಯರಲ್ಲಿ ವಿದೇಶಿ ಆಯ್ಕೆಗಳನ್ನು ಅಂತರ್ಗತವಾಗಿ ಉತ್ತಮವೆಂದು ನೋಡುವ ವಿಶಾಲ ಪ್ರವೃತ್ತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಭಾರತೀಯ ಪೋಷಕರಲ್ಲಿ ಬಹುತೇಕರು ತಮ್ಮ ಮಕ್ಕಳು ವಿದೇಶದಲ್ಲಿ ನೆಲೆಸಬೇಕೆಂದು ಬಯಸುತ್ತಾರೆ. ಪೋಷಕರೊಂದಿಗಿನ ಸಂಭಾಷಣೆಗಳು ಹೆಚ್ಚಾಗಿ ಹೆಚ್ಚಿನ ಸಂಬಳ ಗಳಿಸುವುದು ಅಥವಾ ವಿದೇಶದಲ್ಲಿ ಮನೆ ಖರೀದಿಸುವತ್ತ ಕೇಂದ್ರೀಕರಿಸುತ್ತವೆ. ಇದೆಲ್ಲವೂ ಮೇಲ್ನೋಟದ ವಿಷಯ. ವಿದೇಶದಲ್ಲಿ ಯಶಸ್ಸು ಅಗತ್ಯವಾಗಿ ತೃಪ್ತಿ ಅಥವಾ ಸಂತೋಷಕ್ಕೆ ಕಾರಣವಾಗುತ್ತದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಹೆಚ್ಚು ಅಭಿವೃದ್ಧಿ ಹೊಂದಿದ ದೇಶದಲ್ಲಿ ವಾಸಿಸುವುದರಿಂದ ಸ್ವಯಂಚಾಲಿತವಾಗಿ ಉತ್ತಮ ಜೀವನ ಸಿಗುತ್ತದೆ ಎಂದು ಅನೇಕ ಜನರು ಭಾವಿಸುತ್ತಾರೆ. ಆದರೆ ಹೆಚ್ಚು ಅಭಿವೃದ್ಧಿ ಹೊಂದಿದ ಸ್ಥಳದಲ್ಲಿ ವಾಸಿಸುವುದರಿಂದ ನೀವು ಸಂತೋಷವಾಗಿರುತ್ತೀರಿ ಎಂಬ ಅಭಿಪ್ರಾಯವು ಇದೆ. ಆದರೆ ಆ ಸ್ಥಳಗಳಲ್ಲಿಯೂ ಸಮಸ್ಯೆಗಳಿವೆ. ನ್ಯೂಯಾರ್ಕ್, ಲಂಡನ್, ಸಿಂಗಾಪುರ ಈ ಎಲ್ಲಾ ದೇಶಗಳಲ್ಲಿ ವಿಭಿನ್ನ ರೀತಿಯ ಸಮಸ್ಯೆಗಳಿವೆ. ನಾನು ಇರುವ ಸ್ಥಳ ಭಾರತ. ನಾನು ಎಲ್ಲೇ ಇದ್ದರೂ, ನಾನು ಆಶಾವಾದಿಯಾಗಿರಲು ಮತ್ತು ನನಗಿರುವ ಸಮಯವನ್ನು ಸದುಪಯೋಗಪಡಿಸಿಕೊಳ್ಳಲು ಆಯ್ಕೆ ಮಾಡಿಕೊಳ್ಳುತ್ತೇನೆ ಎಂದು ಹೇಳುವುದನ್ನು ಈ ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ಮೈಸೂರಿನ ಬೀದಿಯಲ್ಲಿ ಬಿರಿಯಾನಿ ಸವಿದು ಸ್ಥಳೀಯರ ಆತಿಥ್ಯಕ್ಕೆ ಮನಸೋತ ವಿದೇಶಿಗ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ನಿಮ್ಮ ಮಾತು ಸತ್ಯ, ಸಂಬಳ ಆಸ್ತಿ ಗಳಿಕೆಗಿಂತ ಸಂತೋಷ ಮುಖ್ಯ ಎಂದು ಹೇಳಿದ್ದಾರೆ. ಇನ್ನೊಬ್ಬರು, ಹೆಚ್ಚಿನ ಪೋಷಕರಿಗೆ ಮಕ್ಕಳನ್ನು ಒಳ್ಳೆಯ ಉದ್ಯೋಗ ಸಿಗುವ ಸಂಬಳದಲ್ಲಿ ನೋಡುವುದರಲ್ಲಿ ಖುಷಿ. ಹೀಗಾಗಿ ವಿದೇಶಕ್ಕೆ ಓದಲು ಹಾಗೂ ಉದ್ಯೋಗಕ್ಕೆ ಕಳುಹಿಸಿಕೊಡುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ನೀವು ಹೇಳಿದ್ದು ತುಂಬಾ ಸರಿ… ಇದೆಲ್ಲ ಮನಸ್ಥಿತಿಗೆ ಸಂಬಂಧ ಪಟ್ಟದ್ದು. ನಿಮ್ಮ ಆಧ್ಯಾತ್ಮಿಕ ಪ್ರಯಾಣವನ್ನು ಸುಧಾರಿಸಬಹುದಾದ ಯಾವುದೇ ದೇಶವನ್ನು ನೀವು ಇಡೀ ಜಗತ್ತಿನಲ್ಲಿ ಕಾಣಲು ಸಾಧ್ಯವಿಲ್ಲ. ನಿಸ್ಸಂಶಯವಾಗಿ ಪ್ರತಿಯೊಂದು ದೇಶದಲ್ಲೂ ಒಳ್ಳೆಯದು ಮತ್ತು ಕೆಟ್ಟದ್ದು ಇರುತ್ತದೆ. ಇದು ಭಾರತಕ್ಕೂ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Source link

Leave a Reply

Your email address will not be published. Required fields are marked *