ಬೆಂಗಳೂರು, ಮೇ10: ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಇಂದು ನಡೆದ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ, ಗುರೂಜಿಯವರು ಕಳೆದ ದಶಕದಲ್ಲಿ ಭಾರತ ಕಂಡ ಅಭೂತಪೂರ್ವ ಬದಲಾವಣೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ದೇಶವು ಬಡತನ ಮತ್ತು ಅಸ್ತವ್ಯಸ್ತತೆಯಿಂದ ಹೊರಬಂದು ಸ್ವಚ್ಛ ಭಾರತದ ಮೂಲಕ ಹೊಸ ಗುರುತು ಪಡೆದಿದೆ ಎಂದು ಬಣ್ಣಿಸಿದ ಅವರು, ರೆಡ್ ಟೆರರ್ ಅಂತ್ಯವಾಗಿ ಭದ್ರತೆ ಸುಧಾರಿಸಿರುವುದು ಹಾಗೂ ಭಾರತವು ಜಾಗತಿಕ ಆರ್ಥಿಕತೆಯಲ್ಲಿ 14ನೇ ಸ್ಥಾನದಿಂದ 3ನೇ ಸ್ಥಾನಕ್ಕೆ ಏರಿರುವುದು ಮೋದಿಯವರ ನೇತೃತ್ವದ ದೊಡ್ಡ ಸಾಧನೆ ಎಂದು ಸ್ಮರಿಸಿದರು. ಇದೇ ವೇಳೆ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣದಲ್ಲಿ ಕರ್ನಾಟಕದ ಶಿಲೆಗಳ ಬಳಕೆಯನ್ನು ಹೆಮ್ಮೆಯಿಂದ ಉಲ್ಲೇಖಿಸುತ್ತಾ, ಯೋಗ ಮತ್ತು ಆಯುರ್ವೇದಕ್ಕೆ ಜಾಗತಿಕ ಮಾನ್ಯತೆ ಸಿಕ್ಕಿದ್ದನ್ನು ಅವರು ಕೊಂಡಾಡಿದಾಗ ಪ್ರಧಾನಿಯವರ ಮುಖದಲ್ಲಿಯೂ ಮಂದಹಾಸ ಮೂಡಿತು.
ಇದನ್ನೂ ಓದಿ: ವಿಜಯ್ ಪ್ರಮಾಣವಚನ: ನಗುನಗುತ್ತಾ ಆಗಮಿಸಿದ ನಟಿ ತ್ರಿಶಾ ವಿಡಿಯೋ ವೈರಲ್
ಇನ್ನಷ್ಟು ವಿಡಿಯೋ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ: